ವಿ ಎಸ್ ಕೆ ಯು:ವಿನಾಯಕಗೆ ಪಿಎಚ್‌ಡಿ ಪದವಿ

ಬಳ್ಳಾರಿ,ಫೆ.24: ಇಲ್ಲಿನ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯವು ವಿನಾಯಕ.ಎ ಅವರಿಗೆ ಸಮಾಜ ಕಾರ್ಯದಲ್ಲಿ ಪಿಎಚ್‌ಡಿ ಪದವಿ ಪ್ರಕಟಿಸಿದೆ.
ವಿನಾಯಕ.ಎ ಅವರು ವಿಶ್ವವಿದ್ಯಾಲಯದ ಸ್ನಾತಕೋತ್ತರ ಸಮಾಜ ಕಾರ್ಯ ಅಧ್ಯಯನ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ.ಕುಮಾರ್ ಅವರ ಮಾರ್ಗದರ್ಶನದಲ್ಲಿ ಮಂಡಿಸಿದ ‘ಅನಾಲಿಸಿಸ್ ಆಫ್ ಕಮ್ಯೂನಿಟಿ ಆರ್ಗನೈಸೇಷನ್ ಪ್ರಾಕ್ಟೀಸ್ ಇನ್ ಕರ್ನಾಟಕ: ಎ ಸೋಷಿಯಲ್ ವರ್ಕ್ ಪರ್ಸ್ಪೆಕ್ಟೀವ್ಸ್’ ಎಂಬ ಮಹಾಪ್ರಬಂಧಕ್ಕೆ ಪಿಎಚ್‌ಡಿ ಪದವಿ ನೀಡಿದೆ ಎಂದು ವಿವಿ ಪ್ರಕಟಣೆ ತಿಳಿಸಿದೆ.
———-